ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ್ ಶೀವನಗರ ನಿವಾಸಿ ಶಿಲ್ಪಾ (30) ಹಾಗೂ ಕೃತ್ಯಕ್ಕೆ ಸಹಕರಿಸಿದ ಸೂಡಾ ಗ್ರಾಮದ ನಿತ್ಯಾನಂದ ದೇವಾಡಿಗ (40), ಸತೀಶ್ ಆರ್. ದೇವಾಡಿಗ (49) ಬಂಧಿತರು. ಈ ಪೈಕಿ ಸದಾನಂದ ಹಾಗೂ ಶಿಲ್ಪಾಳನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನದ ಪೊಲೀಸ್ ಕಸ್ಟಡಿ ನೀಡಲಾಗಿದೆ.
ಕ್ರೈಂಸ್ಟೋರಿ ನೋಡಿ ಕೊಲೆಗೆ ಸಂಚು:
ನಂತರ ತಲೆಮರೆಸಿಕೊಳ್ಳುವ ಸಲುವಾಗಿ ಬೆಂಗಳೂರಿಗೆ ಬಸ್ಸಿನಲ್ಲಿ ಹೊರಟಿದ್ದ ಶೇರಿಗಾರ್ ಹಾಗೂ ಶಿಲ್ಪಾ ಪೂಜಾರಿ, ಬಸ್ ಹಾಳಾಗಿದ್ದರಿಂದ ಮತ್ತೆ ಮೂಡುಬಿದಿರೆಗೆ ವಾಪಾಸಾಗಿದ್ದಾರೆ. ಅಲ್ಲಿಂದ ಕಾರ್ಕಳಕ್ಕೆ ಬೆಳಿಗ್ಗೆ ಬಸ್ಸಿನಲ್ಲಿ ಬರುತ್ತಿದ್ದ ಸಂದರ್ಭ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಹಕರಿಸಿದ ಸದಾನಂದನ ಸಂಬಂಧಿಗಳಾದ ನಿತ್ಯಾನಂದ ಹಾಗೂ ಸತೀಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು:
ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ವ್ಯಕ್ತಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣದ ಬೆಳಕಿಗೆ ಬರುತ್ತಿದ್ದಂತೆ ಬೈಂದೂರಿನ ನಾಗರಿಕರು ಆತಂಕಕ್ಕೆ ಒಳಗಾಗಿದ್ದರು. ಪ್ರಕರಣದ ಬೆನ್ನತ್ತಿದ ಬೈಂದೂರು ಪೊಲೀಸರು ಒಂದೇ ದಿನದಲ್ಲಿ ಆರೋಪಿಗಳನ್ನು ಬೆನ್ನತ್ತಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ದನ್ ಅವ ಮಾರ್ಗದರ್ಶನದಲ್ಲಿ, ಎಎಸ್ಪಿ ಸಿದ್ಧಲಿಂಗಯ್ಯ ಹಾಗೂ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ನಿರ್ದೇಶನದಲ್ಲಿ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರ ನೇತೃತ್ವದಲ್ಲಿ ಬೈಂದೂರು ಪಿಎಸ್ಐ ಪವನ್ ನಾಯಕ್ ಗಂಗೊಳ್ಳಿ ಪಿಎಸ್ಐ ವಿನಯ ಕೊರ್ಲಹಳ್ಳಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ನಾಗೇಂದ್ರ, ಮೋಹನ, ಕೃಷ್ಣ, ಶ್ರೀಧರ, ಪ್ರಿನ್ಸ್, ಚಂದ್ರ ಗಂಗೊಳ್ಳಿ, ಚಾಲಕ ಚಂದ್ರಶೇಖರ್, ಸುಜಿತ್, ಶ್ರೀನಿವಾಸ್, ಶಾಂತರಾಮ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.