ಬೈಂದೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೈಂದೂರು: ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ಹೋಬಳಿ ಘಟಕದ ಸಾರಥ್ಯದಲ್ಲಿ ಡಿಸೆಂಬರ್ ಮೊದಲ ವಾರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ಉಪ್ಪ್ಪುಂದ ಶಂಕರ ಕಲಾ ಮಂದಿರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಮತ್ತು ಹೋಬಳಿ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಯಿತು.
        ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ವಹಿಸಿದ್ದರು. ಮಾಜಿ ಜಿಲ್ಲಾ ಕಸಾಪ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ, ಬೈಂದೂರು ಹೊಬಳಿ ಘಟಕದ ಅಧ್ಯಕ್ಷ ಡಾ. ಸುಬ್ರಮಣ್ಯ ಭಟ್ ಉಪಸ್ಥಿತರಿದ್ದರು.
        ಸ್ವಾಗತ ಸಮಿತಿಯ ರಚನೆ ಹಾಗೂ ಸಮ್ಮೇಳನದ ರೂಪುರೇಷೆಗಳನ್ನು ಕುರಿತು ಸಮಾಲೋಚಿಸಲು ಅ.20 ರಂದು 4 ಗಂಟೆಗೆ ಬೈಂದೂರು ಸೇನೇಶ್ವರ ದೇವಸ್ಥಾನದ ಬಳಿ ಇರುವ ರಂಗಮನೆಯಲ್ಲಿ ಸಾರ್ವಜನಿಕ ಸಭೆ ಕರೆಯಲಾಗಿದೆ. ನಾಡು ನುಡಿ ಅಭಿಮಾನಿಗಳು, ಸಾಹಿತ್ಯಾಸಕ್ತರು ಬಂದು ಸಲಹೆ, ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಸಂಘಟಕರು ತಿಳಿಸಿದರು.