
ಕುಂದಾಪುರ ವಿನಾಯಕ ಟಾಕೀಸ್ ಬಳಿಯ ಆಟೋ ನಿಲ್ದಾಣದಲ್ಲಿರುವ ರಿಕ್ಷಾದ ಮೇಲೆ ಬ್ಯಾನರ್ ಕಂಡು ಎಲ್ಲರೂ ಚಿಕಿತರಾಗಿದ್ದರು. ಮೋದಿ ಸರಕಾರದ ಸಾಧನೆಯಿಂದ ಪ್ರೇರಿತಗೊಂಡಿರುವ ಅಂಕದಕಟ್ಟೆಯ ಸುರೇಶ್ ಪ್ರಭು ಎಂಬುವವರು ಸರಕಾರಕ್ಕೆ ಒಂದು ವರ್ಷವಾದ ದಿನದಂದು ತಮ್ಮ ಆಟೋ ಹಿಂದೆ 1ರೂಪಾಯಿ ಪ್ರಯಾಣ ದರದ ಮಾಹಿತಿ ನೀಡಿ ಓಡುಸುತ್ತಿದ್ದರು ಎಂಬುದು ತಿಳಿದು ಬಂತು . ದಿನದ ಕೊನೆಯಲ್ಲಿ 80 ಪ್ರಯಾಣಿಕರು 1 ರೂಪಾಯಿಯಲ್ಲಿ ಪ್ರಯಾಣಿಸಿ ಖುಷಿಪಟ್ಟರೇ, ಇಂತಹ ಅವಕಾಶ ಮಾಡಿಕೊಟ್ಟ ಸುರೇಶ್ ಪ್ರಭು ತಮ್ಮ ಕೆಲಸದಿಂದ ತೃಪ್ತರಾದರು. ಮೋದಿ ಸರಕಾರ ಅಧಿಕಾರಕ್ಕೆ ಬಂದಾಗಲೂ 1ರೂಗೆ ರಿಕ್ಷಾ ಓಡಿಸಿದ್ದರು.
ಕುಂದಾಪ್ರ ಡಾಟ್ ಕಾಂ- editor@kundapra.com